ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಲ್ಮಾ ಕೆ.ಫಾಹಿಮ್ ರವರಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿನಾಂಕ: 13-06-2024 ಇಂದು ‌ ಮಾನ್ಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಲ್ಮಾ ಕೆ.ಫಾಹಿಮ್ ರವರ
ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಂತರ ದೊಡ್ಡಬಳ್ಳಾಪುರ ತಾಲ್ಲೂಕಿನ APMC ದಾಸ್ತಾನು ಮಳಿಗೆ ಭೇಟಿ ನೀಡಿ ಅಕ್ಕಿ ಮತ್ತು ರಾಗಿ ಸಂಗ್ರಹಣೆಯ ವ್ಯವಸ್ಥೆ ಪರಿಶೀಲಿಸಿದರು.


ನಂತರ ತೂಬಗೆರೆ ಗ್ರಾಮ ಪಂಚಾಯಿತಿಯ ಕಾವನಹಳ್ಳಿ ಗ್ರಾಮದ ಶ್ರೀ ಕಾಂತ ಫಾರಂ ವೇನ್ಸಾಯಿ ಪ್ಲೋರಿಟೆಕ್ ಪಾಲಿಮನೆಯಲ್ಲಿ ಪುಷ್ಪ ಬೆಳೆಗಳು Rose, Gerbera, Gypsophila, Hydrangia, Limonium snapdragon, flowers
ವೀಕ್ಷಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ‌ಡಾ.ಕೆ.ಎನ್.ಅನುರಾಧ ರವರು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತೋಟಗಾರಿಕೆ ಬೆಳೆ ಹೆಚ್ಚು ಅಭಿವೃದ್ಧಿ ಪಡಿಸಿರುವ ಬಗ್ಗೆ ಸಮಾಲೋಚಿಸಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳು ಅಧಿಕಾರಿಗಳು ಉಪಸ್ಥಿತಿದರು.

Leave a Reply

Your email address will not be published. Required fields are marked *

You may have missed